ರಿಂಗಣಿಸಿದ ಮೊಬೈಲ್ ಸೌಂಡ್ಗೆ ಬೇಗ ಬೆಳಗಾಯಿತಾ ಎಂದು ಲಘುಬಗೆಯಲ್ಲಿ ಎದ್ದು ಸ್ಕ್ರೀನ್ ನೋಡಿದರೆ ಆ ಕಡೆಯಿಂದ ಬಾಸ್ ಪೋನ್ . ಟೈಮ್ ಮುಂಜಾನೆ ಎಂಟರ ಸಮಯ. ರಾತ್ರಿ ರೀಡಿಂಗ್ ಗೆ ಕುಳಿತಿದ್ದರಿಂದ ಮಲಗೋದು ಕೊಂಚ ತಡವಾಗಿದ್ದೆ ಅಷ್ಟೊಂದು ನಿದ್ದೆಗೆ ಕಾರಣವಾಗಿತ್ತೋ ಏನೋ ಗೊತ್ತಿಲ್ಲ. ಆಲ್ ಮೋಸ್ಟ್ ಎಲ್ಲರೂ ಕಾಳಜಿಯಿಂದ ನನಗೆ ಬೈಯೋದು ಇತ್ತೀಚೆಗೆ ಮಾಮೂಲಾಗಿತ್ತು. ಸರಿ ಟೈಮ್ ಗೆ ಊಟ ತಿಂಡಿ ಮಾಡಲ್ಲ, ಸರಿಯಾದ ಸಮಯಕ್ಕೆ ಮಲಗಲ್ಲ ಅಂತ ಕೇಳಿಸಿಕೊಂಡು ಕೇಳಿಸಿಕೊಂಡು ಕಿವಿಗೆ ಜಿಡ್ಡು ಹಿಡಿದಂತಿತ್ತು.
ಪ್ರತಿದಿನದಂತೆ ಹೆಡ್ ಫೋನ್ನನ್ನು ಕಿವಿಗೆ ಸಿಕ್ಕಿಸಿಕೊಂಡು, ಗುನುಗುನಿಸಲು ಮೆಲ್ಲನೆ ಒಂದು ಹಾಡನ್ನು ಹಾಕಿಕೊಂಡು, ನನ್ನ ರೆಂಜ್ನ ಮಿನಿಮಮ್ ಸ್ಫೀಡ್ನಲ್ಲಿ ಬೈಕ್ ಏರಿ ಸರಾಗವಾಗಿ ಹೊರಟೆ.
ಅದಾಗಲೇ ಶಾಲಾವಾಹನಗಳು, ಅಟೋರಿಕ್ಷಾಗಳು, ಬಸ್ಗಳೆಲ್ಲ ಮಕ್ಕಳನ್ನು ಶಾಲೆಗೆ ತಲುಪಿಸುವ ಕೆಲಸವನ್ನು ಪಾರಂಭಿಸಿ, ಎಲ್ಲೆಂದರಲ್ಲಿ ಪುಟಾಣಿಗಳನ್ನು ತುಂಬಿಸಿಕೊಳ್ಳುತ್ತಿದ್ದವು. ಅಷ್ಟೆಲ್ಲಾ ಬದುಕು ಭಿನ್ನಣದ ನಡುವೇ ಆ ದಿನ ದಾರಿ ಮಧ್ಯೆ ಕಂಡ ಒಂದೇ ಒಂದು ಸೀನ್ ಮಾತ್ರಾ ನನ್ನ ಕಣ್ಣನ್ನು ಸೆಳೆದು ಮನಸ್ಸನು ಮುಟ್ಟಿ ಬೈಕ್ನ ವೇಗವನ್ನು ತಗ್ಗಿಸಿ, ನಿಲ್ಲಿಸುವಂತೆ ಮಾಡಿತು.
ನೋಡಿದ್ದಿಷ್ಟೇ...
ತಾಯಿಯೊಬ್ಬಳು ತನ್ನ ಮಗುವನ್ನು ಕಂಕುಳಲ್ಲಿ ಹಿಡಿದುಕೊಂಡು ಎದುರು ಕಾರ್ನರ್ ರೋಡ್ನಿಂದ ಓಡುತ್ತಾ ಬರುತ್ತಿದ್ದಳು. ಆಕೆ ನೋಡಲು ಎಷ್ಟೊಂದು ಕುರೂಪಿಯಾಗಿದ್ದಾಳೆಂದರೆ, ಶಿ ಇಸ್ ಕಂಪ್ಲೀಟ್ಲಿ ಲುಕ್ ಲೈಕ್ ಔಟ್ ಆಫ್ ಬ್ಲಾಕ್...
ರಸ್ತೆ ಬದಿ ಬೇಡಲು ಬರುವ ಬಿಕ್ಷುಕಿಯನ್ನಾದರೂ ನೋಡಬಹುದು ಆದರೆ ಅದಕ್ಕಿಂತಲೂ ವಕೃವಾಗಿ, ವಿರೂಪಿಯಾಗಿ, ಕುರೂಪಿಯಂತೆ ಹರಿದ ಸೀರೆ ಉಟ್ಟು, ಒಂದೇ ಮಗ್ಗಲಲ್ಲಿ ಮಲಗಿ ಎದ್ದವಳಂತೆ ಗಿಜಿ-ಗಿಜಿ ಕೂದಲಲ್ಲಿ ಒಂದಿಷ್ಟು ಮಣ್ಣ ಮೆತ್ತಿದಂತೆ, ಬಾಯಲ್ಲಿರುವ ಹಲ್ಲು ತಂಬಾಕು ಸೇವನೆಯಿಂದ ಕಪ್ಪಾಗಿಸಿಕೊಂಡಿದ್ದಂತೆ, ಸಂಪೂರ್ಣ ಅನಾಥಳ ಹಾಗೆ ಬಾಳಿ ಬದುಕಿ, ಭಿನ್ನವಾಗಿ ಕರಾಬಾಗಿ ಕಾಣುತ್ತಿದ್ದಳು. ಆದರೆ ತನ್ನಪ್ಪುಗೆಯಲ್ಲಿದ್ದ ಕಂದನನ್ನು ಮಾತ್ರಾ ಅದೆಷ್ಟು ಸಿಂಗರಿಸಿ, ಮುದ್ದಾಗಿಸಿ ಅಂದವಾಗಿರಿಸಿದ್ದಳೆಂದರೆ ರಸ್ತೆ ಮೇಲಿರುವ ಜನರ ದೃಷ್ಟಿ ಆ ಮಗುವಿಗೆ ತಾಗುವುದೇನೋ ಅನ್ನಿಸುವಂತಿತ್ತು. ವಿಶೇಷವೇನೆಂದರೆ ಅವಳಂದದ ಬಗ್ಗೆ ಅವಳಿಗೇನೂ ಬೇಸರವಿರಲಿಲ್ಲ ತನ್ನ ಮಗುವಿನ್ನು ಸಿಂಗರಿಸಿ ಸ್ಕೂಲ್ ಬಸ್ ಗೆ ಹತ್ತಿಸಲು ಎಷ್ಟೊಂದು ಉತ್ಸುಕಳಾಗಿ ಆಯಾಸವಿಲ್ಲದೇ ಓಡಿ ಬರುತ್ತಿದ್ದಳೆಂದರೆ ಅದನ್ನು ನೋಡುತ್ತಲೇ ನಾನೊಂದು ಕ್ಷಣ ತನ್ಮಯನಾದೆ. ಬಸ್ ಇನ್ನೇನು ಮುಂದೆ ಚಲಿಸುವುದು ಎನ್ನುವಷ್ಟರಲ್ಲಿ ಬಾಗಿಲಿನೊಳಗೆ ಹತ್ತಿ ಮಗುವಿಗಾಗಿ ಕಾದಿರಿಸಿದ್ದ ಸೀಟ್ ನಲ್ಲಿ ಕೂರಿಸಿ, ಮೆಲ್ಲನೆ ಕೆಳಗೆ ಎಗರಿ ಮುಗ್ಧ ಕಂದಮ್ಮಗೆ ಕೈ ಮಾಡಿದ್ದಳು ಟಾಟಾ ಟಾಟಾ ಎಂದು. ಅದಕ್ಕುತ್ತರವಾಗಿ ಮಗಳ ಎರಡು ಕೈಗಳ ಜೊತೆಗೆ ಬಸ್ನಲ್ಲಿದ್ದ ಹತ್ತಿಪ್ಪತ್ತು ಮಕ್ಕಳು ತಮ್ಮೆಲ್ಲ ತೊಳನ್ನು ಮೇಲಕ್ಕೆತ್ತಿ ಅವಳಿಗೆ ಹೋಗಿ ಬರುವೆವು ಅಮ್ಮಾ ಎನ್ನುವಂತೆ ಟಾಟಾ ಮಾಡುತ್ತಿದ್ದದ್ದೂ ನೋಡಿದರೆ ಎಂತಹವರಿಗೂ ಸನ್ನಿವೇಶ ಮನ ತಟ್ಟದೆ ಇರದು. ನಿಜಕ್ಕೂ ಆ ತಾಯ ಜೀವ ಆ ಸಂಧರ್ಭ ಎಷ್ಟು ಖುಷಿ ಪಟ್ಟಿರಬಹುದು ಅಲ್ವಾ...
ಪ್ರತಿಯೊಂದರಲ್ಲೂ ಶಿಸ್ತು, ಅಂದ ಚಂದ ಲೆಕ್ಕ ಹಾಕುವ ನಾವು, ಇಂತಹ ಅದೆಷ್ಟೋ ಪ್ರೀತಿಗಳನ್ನು ಕಳೆದುಕೊಂಡಿರುತ್ತೇವೋ ದೇವನೇ ಬಲ್ಲ. ಯಾವ ಕುಹಕವೂ ಇರದ ಮುಗ್ಧ ಮನಸ್ಸಿನ ನಗುವನ್ನು ಹೊಂದಿರುವ ಆ ಪುಟ್ಟ ಮಕ್ಕಳಿಗೆ ಯಾವ ಭೇಧ ಭಾವವು ಇಲ್ಲದೇ ಪ್ರೀತಿಸುವ ಹೃದಯ ಎಲ್ಲಾ ತಿಳಿದ-ಬೆಳೆದ ನಮಗೆ ಇಲ್ಲವಲ್ವಾ...ಎಂದು ಮನ ಮೌನಮುರಿಯಿತು. ಜೀವನ ಜೋಪಾನ ಮಾಡುವ ತಾಯಿಯ ಪ್ರೀತಿ ಪ್ರತಿ ಮಕ್ಕಳು ಎಷ್ಟು ಬಡತನವಿದ್ದರೂ ಸಿರಿತನದಲ್ಲೇ ಹೇಗೆಲ್ಲಾ ಅನುಭವಿಸುತ್ತಾರೆ ಎನ್ನುವುದನ್ನು ಆ ಒಂದು ಸೀನ್ ಕಣ್ಮುಂದೆ ಬಂದು ತೋರಿಸಿತು.ಮಕ್ಕಳ ಪ್ರೀತಿ ಒಂದು ಕಡೆ, ತಾಯಿಯ ಪ್ರೀತಿ ಇನ್ನೊಂದು ಕಡೆ ಇವೆರಡನ್ನು ನೋಡಿ ಮನಸ್ಸು ಕೇಳಿತು ಪ್ರೀತಿ ಎಂದರೆ ಇದೇನಾ!???
*******************
ಇದೊಂದು ಅನ್ ಎಕ್ಸಫೆಕ್ಟೆಡ್ವ ಇನ್ಸಿಡೆಂಟ್...
ಈ ಘಟನೆ ನಡೆದಿದ್ದು ಮೊನ್ನೆ ಮೊನ್ನೆ . ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಮಗಳ ಮದುವೆಗೆ ಎಲ್ಲರಂತೆ ನಮಗೂ ಆಮಂತ್ರಣವಿತ್ತು. ಕಳೆದ ಎರಡು ದಿನದಿಂದಲೂ ಅರಮನೆ ಮೈದಾನದಲ್ಲಿ ದೊಡ್ಮನೆ ಮದುವೆಯದೇ ಗಲಾಟೆ, ಇಡೀ ಅರಮನೆ ಮೈದಾನವನ್ನೇ ರೊಚ್ಚಿಗೆಬ್ಬಿಸಿತ್ತು. ಸ್ಟಾರ್ ನಟನ ಮಗಳ ಮದುವೆ ಎಂದರೆ ನಾರ್ಮಲ್ಲಿ ಎಲ್ಲಾ ಸ್ಟಾರ್ಸ್ಗಳು ಹಾಜರಾಗಿಯೇ ಆಗುತ್ತಾರೆ. ನಮ್ಮ ಜನತೆ ಮನೆಯಲ್ಲಿ ದೇವರನ್ನು ಪೂಜಿಸುತ್ತಾರೋ ಇಲ್ಲವೋ!? ಆದರೆ ಸಿನಿಮಾ ನಟ/ನಟಿಯನ್ನು ಮಾತ್ರಾ ದೇವರಿಗಿಂತ ಎತ್ತರದಲ್ಲಿ ನಿಲ್ಲಿಸಿ, ಅಯ್ಯೋ ಅವರನ್ನು ನೋಡುವುದೇ ಒಂದು ಭಾಗ್ಯವೆನ್ನುತ್ತಾರೆ. ಅಪ್ಪಿ ತಪ್ಪಿ ಅವರನ್ನು ನೋಡಿದರೆ ತಿರುಪತಿ ತಿಮ್ಮಪ್ಪನ ಮೊದಲ ದರ್ಶನ ಮಾಡಿದ್ದಕ್ಕಿಂತಲೂ ದೊಡ್ಡ ಖುಷಿ ಘೋಷವನ್ನು ಸಾರಿ-ಸಾರಿ ನೆನೆದು ಹಲುಬುತ್ತಾರೆ. ಹಿಂದಿನ ದಿನದಂತೆ ಆ ದಿನವೂ ಚಿತ್ರರಂಗದ ಅನೇಕಾನೇಕ ಗಣ್ಯರೂ ಆಗಮಿಸಿ ಆಶೀರ್ವಧಿಸಿ ವಧು-ವರರನ್ನು ಹರಸುತ್ತಿದ್ದರೂ. ನಮ್ಮದೂ ಅದೇ ನಡೆ. ಅಂತೂ ನಾನು, ಭಾಸ್, ಅಭಿ, ರಾಜೇಶ್ ನಾಲ್ಕು ಮಂದಿ ಜನಗಳ ಮಧ್ಯೆ ಸಿಕ್ಕಿಹಾಕಿಕೊಂಡು, ಅಲ್ಲೋ-ಇಲ್ಲೋ ನಾಲ್ಕಾರೂ ಆಫಿಸರ್ಗಳ ಪರಿಚಯವಿದ್ದ ಕಾರಣ, ವಿ.ವಿ.ಐ.ಪಿ ಎಂಟ್ರೆನ್ಸ್ನಲ್ಲಿ ಒಳನುಗ್ಗಿ, ಒಂದಷ್ಟು ಹೊತ್ತು ಸ್ಟೇಜ್ನಲ್ಲಿ ನಿಂತು, ನಂತರ ಊಟವನ್ನು ಮುಗಿಸಿ, ಹೊರನಡೆಯಲು ಅಣಿಯಾದೆವು. ಎಲ್ಲಿ ಕಂಡರೂ ಪೊಲೀಸ್ ಬಂದೋಬಸ್ತು ಹೇರಳವಾಗಿತ್ತು. ಅದು ದೊಡ್ಮನೆ ಮದುವೆಯಾದ್ದರಿಂದ, ಭೋಜನ ಶಾಲೆಯಲ್ಲಿ ವಿವಿಧ ತಿಂಡಿ ತಿನಿಸುಗಳ ಜೊತೆಗೆ ಬಂದ ಪ್ರತಿಯೊಬ್ಬರಿಗೂ ಹೊಸ ಹೊಸ ಪ್ಲೇಟನ್ನು ಆಗತಾನೆ ಕವರ್ನಿಂದ ತೆಗೆ-ತೆಗೆದು ಕೊಡುತ್ತಿದ್ದರು. ಬಹುಶಃ ಅದನ್ನು ನೀಡುವವನಿಗೆ ನಾನ್ಯಾರಿಗೆ ನೀಡುತ್ತಿರುವೆ ಎನ್ನುವ ಪರಿವೇ ಇರಲಿಕ್ಕಿಲ್ಲ ಯಾಕೆಂದರೆ ಅದು ಲಕ್ಷ ಜನರಿಗೂ ಮಿಕ್ಕಿ ಸೇರಿದ್ದ ಮದುವೆಯ ಸಂಭ್ರಮ.
ಅವನ್ಯಾರೋ ಗೊತ್ತಿಲ್ಲ. ಬಡವನಂತೆ ಕಾಣುತ್ತಾನೆ. ಶಿವಣ್ಣನ ಅಭಿಮಾನಿಯೋ ಅಥವಾ ಎಲ್ಲ ಬರುತ್ತಾರೆ ಅಂತ ನಾನು ಮದುವೆಗೆ ಹೋಗಿ ಊಟ ಮಾಡಿ ಬರೋಣವೆಂದು ಬಂದಿದ್ದಾನೆಯೋ ಗೊತ್ತಿಲ್ಲ!!!. ಆದರೆ ಊಟ ಮಾಡಿದಾತ ಮತ್ತೊಮ್ಮೆ ಪ್ಲೇಟ್ ಕೊಡುವ ಕೌಂಡರ್ ಗೆ ಹೋಗಿ ಹೊಸತೊಂದು ಕವರ್ ಹೊಂದಿರುವ ಪ್ಲೇಟ್ ತೆಗೆದುಕೊಂಡು ಲಾಗ್ ಔಟ್ ಆಗುವ ಗೇಟ್ನ ಕಡೆಗೆ ನಮ್ಮ ಜೊತೆನೆ ಹೊರಬರುತ್ತಿದ್ದ. ಉಳಿದ ಎರಡು ಮೂರು ಗೇಟ್ನಲ್ಲಿ ಅವನ ಕೈಲಿರುವ ಪ್ಲೇಟ್ ಪೊಲೀಸ್ ಮಾಮರ ಕಣ್ಗೆ ಬಿಳದೇ ಕೊನೆಯ ಗೇಟ್ ದಾಟಿ ಇನ್ನೇನು ಹೊರಗೆ ಹೋದ ಎನ್ನುವಷ್ಟರಲ್ಲಿ ಒಬ್ಬ ಪೇದೆಯ ಕಣ್ಣಿಗೆ ಇವನ ಕೈಲಿರುವ ಪ್ಲೇಟ್ ಕಂಡು ಬಂದು ‘ಲೇ ಲೋಫರ್ ಎಲ್ಲಿಗೆ ಪ್ಲೇಟ್ ತಗೊಂಡು ಹೋಗ್ತಿದ್ದೀಯಾ? ಊಟ ಮಾಡಲು ಪ್ಲೇಟ್ ಕೊಟ್ಟರೆ ಅದನ್ನು ಕದ್ದು ಒಯ್ಯುತ್ತಿದ್ದೀಯಾ!? ಎಂದು ಹಿಡಿದುಕೊಂಡ. ಪೊಲೀಸ್ ಮಾಮನೇನೋ ತಾನೋಬ್ಬ ಘನಂಧಾರಿ ಎಂಬಂತೆ ಆ ಯುವಕನನ್ನು ಅಷ್ಟು ಜನರ ಮಧ್ಯೆ ಕರೆದು, ನಾಲ್ಕಾರೂ ಬೈಗುಳವನ್ನಿತ್ತು, ಇಲ್ಲೇ ಇಟ್ಟು ಹೋಗು ಎನ್ನುವಂತೆ ಗಧರಿಸಿ ಅವಮಾನಿಸಿ, ಮೂಲೆಯೊಂದರಲ್ಲಿ ಪ್ಲೇಟನ್ನು ಇರಿಸಿ ಅವನನ್ನು ಕಳುಹಿಸಿದ ಆದರೆ ಇದೆಲ್ಲವನ್ನು ಜನರ ಮಧ್ಯೆದಲ್ಲಿ ನಾನೊಬ್ಬನಾಗಿ ನೋಡುವಾಗ ಒಂದೆರಡು ಕ್ಷಣ ಮನಸು ಆತನ ಮನದಿಂಗಿತ ಹೀಗಿರಬಹುದೇನೋ ಎಂದು ಮರುಗಿತು.
“ನಾನೊಬ್ಬ ಬಡವ, ಈ ಪ್ಲೇಟ್ನ್ನು ದುಡ್ಡು ಕೊಟ್ಟು ಖರೀಧಿಸಲು ಸಾಧ್ಯವಿಲ್ಲ. ಬಹುಶಃ ಇಷ್ಟೊಂದು ಚೆಲ್ಲಾಪಿಲ್ಲಿಯಾಗಿರುವ ಪ್ಲೇಟ್ಗಳಲ್ಲಿ ಒಂದನ್ನು ನನ್ನ ಮನೆಗೆ ತೆಗೆದುಕೊಂಡು ಹೋದರೆ ನನ್ನ ಹೆಂಡತಿ ಅಥವಾ ಮಗ/ಮಗಳು ಖುಷಿಯಾಗಬಹುದು. ಅವರಿಗೆಲ್ಲಾ ಇಷ್ಟೊಂದು ದೊಡ್ಡ ಸಮಾರಂಭಕ್ಕೆ ಬಂದು ಊಟ ಮಾಡಲು ಆಗುವುದಿಲ್ಲ. ಅಟ್ಲೀಸ್ಟ್ ಇಂತ ಪ್ಲೇಟ್ಗಳಲ್ಲಾದರೂ ಊಟ ಮಾಡಿ ಖುಷಿ ಪಡಲಿ, ಮಗ/ಮಗಳಾದರೂ ಖುಷಿಯಿಂದ ನಲಿಯಲಿ, ಇದರಲ್ಲಿ ನನ್ಮಗ/ಮಗಳು ಊಟ ಮಾಡುತ್ತಾಳೆ ಎನ್ನುವಂತಿತ್ತೋ ಏನೋ” ಎಂದೆನಿಸಿತು. ಅದಾಗಲೇ ಮನದೊಳಗಿಂದ ಪ್ರೀತಿ ಎಂದರೆ ಇದೇನಾ ಎನ್ನುವ ಭಾವ ಹೊರಹೊಮ್ಮಿ ಕಂಬನಿ ಕಣ್ಣಿನಂಚಲಿ ಜಾರಿತ್ತು...
“ಅರಿವಿಲ್ಲದೇ ಆದ ಒಲವಿನ ಚೆಲುವು ತಿಳಿಸಿ ಕೇಳಿತು ಪ್ರೀತಿ ಎಂದರೆ ಇದೇನಾ!?..” ನೀವೇ ಹೇಳಿ ಉತ್ತರ...
No comments:
Post a Comment