Wednesday 23 December 2015

ವೆಂಕಟ ಇನ್ ಸಂಕಟ...


ಟಿ.ವಿ ಮಾಧ್ಯಮಗಳೇ ಶೇಮ್... ಶೇಮ್...
ಖಾಸು ಸಿಗುತ್ತದೆಂದು ಬಾಸು ಆದ ಹುಚ್ಚ ವೆಂಕಟ್...
ಟಿ.ಆರ್.ಪಿ ಸುಲ್ತಾನನ ಫೈರಿಂಗ್
ಅಂದು ಜಂಗಲ್ ಜಾಕಿ ರಾಜೇಶ ಇಂದು ಹುಚ್ಚ ವೆಂಕಟ್...

              ‘ನನ್ ಎಕ್ಡಾ.., ನನ್ ಮಗಂದ್.., ಬ್ಯಾನ್ ಆಗ್ಬೇಕ್...’ಈ ಡೈಲಾಗ್‍ಗಳೆಲ್ಲ ಇದೀಗ ಸಣ್ಣ ಮಗುವಿನಿಂದ ಹಿಡಿದು ಹಿರಿಯವರೆನಿಸಿಕೊಂಡ ದೊಡ್ಡಣ್ಣರ ಬಾಯಲ್ಲೂ ಕಾಮನ್ ಆಗಿ ಬಿಟ್ಟಿದೆ...ಇದಕ್ಕೆ ಕಾರಣ ವೆಂಕಟ್ ಹುಚ್ಚ ವೆಂಕಟ್... ಇರಬಹುದು ಹುಚ್ಚು ಮನಸ್ಸಿಗೆ ಹತ್ತು ಮುಖಗಳಂತೆ ಇತ್ತೀಚಿಗೆ ಟಿ.ವಿ ಮಾಧ್ಯಮದಲ್ಲಿ ಭಿತ್ತರವಾಗುತ್ತಿರುವ ವೆಂಕಟನ ಸಂಕಟ ವೀಕ್ಷಿಸಿ ನಗು, ಅಸಹನೆ, ನೋವು ಎಮಬಿತ್ಯಾದಿಗಳನ್ನೆಲ್ಲ ತಾಳಲಾರದೇ ಈಗ ಜನ ಹೇಳುತ್ತಿದ್ದಾರೆ ಹುಚ್ಚು ಮನಸ್ಸಿಗೆ ಹತ್ತಲ್ಲ ನೂರೋ, ನೂರಿಪ್ಪತ್ತೋ ಮುಖಗಳಿರಬೇಕು ಎಂದು!!. ಬಹುಶಃ ಇಂತದ್ದೊಂದು ಆಲೋಚನೆ ಮೂಡಿ ಬಂದಿದ್ದು ಹುಚ್ಚ ವೆಂಕಟ್‍ರವರ ಡಿಬೆಟ್ ಪ್ರೋಗ್ರಾಮ್ ನೋಡಿದ ಮೇಲೆಂದರೆ ಅನುಮಾನ ಸುಳಿಯುವುದಿಲ್ಲ ಬಿಡಿ. ನಾವು ಕನ್ನಡಿಗರೂ ವಿಶಾಲ ಹೃದಯದವರು, ಅನೇಕ ಒಳ್ಳೆಯ ಲೋಕ ಕಲ್ಯಾಣದ ವಿಚಾರಗಳಿದ್ದರೂ ಅವುಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ಹುಚ್ಚುಚ್ಚಾದ ವಿಷಯಗಳಿಗೆ ತಲೆ ಕೆರೆದುಕೊಳ್ಳುವುದು ಜಾಸ್ತಿ...ನಮ್ಮವರಿಗೆ ಮನೆ ಒಡೆಯುವುದರಲ್ಲಿರುವ ಸುಖ ಮನೆ ಕಟ್ಟುವುದರಲ್ಲಿಲ್ಲ. ಯಾರೂ ಹುಚ್ಚನಾಗಿದ್ದಾನೆ, ಯಾರನ್ನು ಹುಚ್ಚನ ಸ್ಥಾನದಲ್ಲಿ ನಿಲ್ಲಿಸಿ ಗೋಳಾಡಿಸುವುದು, ಎಂಬಿತ್ಯಾದಿ ವಿಚಾರಗಳನ್ನು ಕೆಲವೇ ಕೆಲವು ಮಂದಿ ನಿರ್ಧರಿಸಿ ಮೀಡಿಯಾ ಎಂಬ ಬಣ್ಣವನ್ನು ಹಚ್ಚಿ, ಕುಣಿಸಿ, ನಂತರ ಹೀರೋವಾಗಿಸುತ್ತಾರೆ. ಅವನ ಪ್ರತಿ ಘಳಿಗೆಯನ್ನು ಉಪಯೋಗಿಸಿಕೊಂಡು ಹಣ ಸಂಪಾದಿಸಿ ನಂತರ ಸತ್ತನೋ!, ಜೀವಿದ್ದನೋ! ಎಂಬುದನ್ನು ತಿಳಿಯದೇ ಮುಗ್ಧರಂತಿರುತ್ತಾರೆ. ಸದ್ಯಕ್ಕೆ ಇವು ಈ ತಿಂಗಳ ಹೈಲೆಟ್...
 ಕರೆಕ್ಟ್...ಇಲ್ಲಿನ ಸಮಸ್ಯೆ ಎದ್ದು ಕಾಣುತ್ತಿರುವುದು ಒಬ್ಬ ವ್ಯಕ್ತಿಯ ಅಭಿವ್ಯಕ್ತತೆಯ ಶೈಲಿಯಲ್ಲಿ ಅಷ್ಟೆ.  ಹುಚ್ಚ ವೆಂಕಟ್ ಒಬ್ಬ ಹುಚ್ಚ ಅಲ್ಲದಿದ್ದರೂ ಅವನ ಸಿನಿಮಾ ಹುಚ್ಚು,  ಕೆಲವೊಂದು ವಿಚಾರದಲ್ಲಿ ಆತ ತೆಗೆದುಕೊಳ್ಳುವ ನಿರ್ಣಯಗಳು, ಮಾತುಗಳು, ಅಷ್ಟೇ ಅಲ್ಲದೇ ಅವನ ಸಿನಿಮಾ ಟೈಟಲ್, ಎಲ್ಲಾ ಜೊತೆ ಜೊತೆಗೆ ಸೇರಿಸಿ ಆತನನ್ನ ‘ಹುಚ್ಚ’ನನ್ನಾಗಿ ಮಾಡಿದೆ ಅಷ್ಟೇ. ವೆಂಕಟ್ ಒಳಗೆ ಒಂದು ಮುಗ್ಧ ಮನಸ್ಸಿದೆ ಅದರ ಬಗ್ಗೆ ಯಾವ ಅನುಮಾನವೂ ಇಲ್ಲ, ಯಾವ ನಿರಾಸಕ್ತಿಯೂ ಇಲ್ಲ ಬದಲಾಗಿ ಅಭಿಮಾನವಿದೆ. ಎಷ್ಟೇ ಏನೆ ಅನ್ ವಾಂಟೆಡ್ ಸ್ಟೇಟ್‍ಮೆಂಟ್ ಇದ್ದರೂ ಈ ಒಂದು ಕಾರಣಕ್ಕಾಗಿಯೇ ಜನರಿಗೆ ಈತ ಹಿಡಿಸಿರಬೇಕು.
ಕಳೆದೆರಡು ಆವೃತ್ತಿಯ ಬಿಗ್‍ಬಾಸ್ ಎನ್ನುವ ಹೈ ಬಜೆಟ್  ಡ್ರಾಮಾ ಇಡೀ ಕರ್ನಾಟಕದ ಜನತೆಗೆ ಎಷ್ಟು ತಿಳಿದಿತ್ತೋ, ಮನೆರಂಜನೆ ನೀಡಿತ್ತೋ ತಿಳಿದಿಲ್ಲ. ಆದರೆ ಈ ಬಾರಿಯ ಬಿಗ್ ಬಾಸ್ ಅಂತೂ  ಉಳಿದೆಲ್ಲಾ ಟಿ.ವಿ ಕಾರ್ಯಕ್ರಮಗಳಿಗಿಂತ ಹೆಚ್ಚು ವೀಕ್ಷಿಸಲ್ಪಟ್ಟಿದೆ ಎಂದು ಬಿಗ್‍ಬಾಸ್ ಮಂಡಳಿ ಹೆಮ್ಮೆಯಿಂದ ಬೀಗಿದೆ. ಅನೇಕ ಜನ ಹೇಳುವಂತೆ ಇದಕ್ಕೆಲ್ಲಾ ಒಬ್ಬನೇ ಒಬ್ಬ ವ್ಯಕ್ತಿ ಕಾರಣ ಅವನೆ ಹುಚ್ಚ ವೆಂಕಟ್. ಈ ಮೊದಲು ಎರಡು ಸಿನಿಮಾಗಳಲ್ಲಿ ಅಭಿನಯವನ್ನು ತೋರಿದ್ದರೂ ವೆಂಕಟ್ ಥೀಯೇಟರ್‍ನಲ್ಲಿ ಸ್ಟಾರ್ ನಾಯಕನಾಗಿ ಹೊರಬೀಳಲಿಲ್ಲ. ಬದಲಾಗಿ ನಿರಾಸೆಯ ಆಕ್ರೋಶದಿಂದ ಹೊರಬಿದ್ದು, ಬಾಯಿಗೆ ಬಂದ ಸ್ಟೇಟಸ್ ನೀಡಿ ಯುಟ್ಯೂಬ್‍ನಲ್ಲಿ ಅಲ್ಟೀಮೇಟ್ ಹಿಟ್ ಆಗಿದ್ದ. ಅದೇ ಡೈಲಾಗು, ಅವನದೇ ವೈಖರಿಯನ್ನು ಅನೇಕ ಜನ ಅನುಕರಿಸಿ ಎಲ್ಲರ ಕಣ್ಣು ವೆಂಕಟ್ ಮೇಲೆ ಎನ್ನುವಂತಾಗಿತ್ತು. ಅದು ಬಿಗ್‍ಬಾಸ್ ಮನೆಗೂ ಎಂಟ್ರಿ ದೊರಕಿಸಿಕೊಟ್ಟಿತ್ತು. ಅಲ್ಲಿಯೂ ತನ್ನ ಬುದ್ಧಿಯನ್ನು ಎಳ್ಳಷ್ಟೂ ಬಿಟ್ಟುಕೊಡದ ವೆಂಕಟ್ ತಂದೆ, ತಾಯಿ ಹಾಗೂ ಹೆಣ್ಮಕ್ಕಳ ಬಗ್ಗೆ ಅಪಾರ ಅಭಿಮಾನದ ಮಾತುಗಳನ್ನಾಡಿ ಅಭಿಮಾನಿಗಳ ಗುಂಪನ್ನು ಗಿಟ್ಟಿಸಿಕೊಂಡು ಎಲ್ಲರಿಗೂ ಅಣ್ಣನಾಗಿಯೇ ಬಿಟ್ಟ...
 ಬಹುಶಃ ಇಲ್ಲಿಯವರೆಗೆ ಆಗಿದ್ದೆಲ್ಲವೂ ಆತನ ವೈಯಕ್ತಿಕ ವಿಚಾರ ಆಗಿದ್ದಿರಬಹುದು. ಆದರೆ ಇನ್ನೂ ಮುಂದೆ ಸಂಭವಿಸಿದ್ದು ನಿಜಕ್ಕೂ ವಿಷಾಧನೀಯ. ಇದರಲ್ಲಿ ಜನತೆಯ ತಪ್ಪೇನು ಇರಲಿಕ್ಕಿಲ್ಲ ಯಾಕೆಂದರೆ ಯಾರೊಬ್ಬನನ್ನು ಅವರು ಹೀರೋ ಮಾಡಬೇಕೆಂದರೂ, ಆತ ಟಿ.ವಿ.ಯಲ್ಲಿ ಮೊದಲು ಕಾಣಿಸಿಕೊಂಡು ಓ.ಕೆ ಆದ ಮೇಲೆ ಬೆಂಬಲ ಸೂಚಿಸಿ ಚಪ್ಪಾಳೆ ತಟ್ಟೋದು. ಆದರೆ ಟಿ.ವಿಯವರು ಎಂತಹವರನ್ನು ಬೇಕಾದರೂ ಸ್ಟಾರ್ ಮಾಡುತ್ತಾರೆ!. ಆ ತಾಕತ್ ಅವರಿಗಿದೆ ಬಿಡಿ!!!. ನಮ್ಮಲ್ಲೂ ಸ್ಟಾರ್‍ಗಿರಿಗೇನೂ ಕಡಿಮೆ ಇಲ್ಲ. ಎಂತಹವ ಬೇಕಾದರೂ ರಾತ್ರಿ ಬೆಳಗಾಗುವುದರೊಳಗೆ ಸ್ಟಾರ್ ಆಗಿ ಬಿಡುವ, ಬಿಡಿಸುವ  ಶಕ್ತಿ ನಮಗಿದೆ. ಇಲ್ಲಿಯ ನನ್ನ ನೋವು ಹುಚ್ಚ ವೆಂಕಟನ ಮೇಲೂ ಅಲ್ಲ, ಹೀರೋ ಮಾಡಿದ ಜನತೆಯ ಮೇಲೂ ಅಲ್ಲ ಟಿ.ಆರ್.ಪಿ ಹುಚ್ಚು ಹಿಡಿದಿರೋ ಟಿವಿ ಮಾಧ್ಯಮಗಳ ಮೇಲೆ. ಪ್ರಸರಿಸೋ ಪ್ರತಿ ಕಾರ್ಯಕ್ರಮವನ್ನು ಸ್ಲ್ಯಾಟ್ ಎನ್ನುವ ಸಂಭಾವನೆಯಲ್ಲಿಯೇ ಮುಳುಗುವ ವಾಹಿನಿಗಳಿಗೆ ಇತ್ತೀಚೆಗೆ ವೆಂಕಟನ ಲೀಲೆ ಖಾಸು ಮಾಡಲು ದಾರಿ ಮಾಡಿ ಕೊಟ್ಟಿತ್ತೆಂದರೆ ಅತಿಶಯೋಗ್ತಿಯಲ್ಲ.  ರವಿ ಮುರೂರು  ಮೇಲೆ ಹಲ್ಲೆ ಮಾಡಿದ ಪರಿಣಾಮ ಬಿಗ್‍ಬಾಸ್ ಮನೆಯಿಂದ ಹೊರಬಿದ್ದ ವೆಂಕಟ್‍ಗೆ ಅಭಿಮಾನಿ ಬಳಗವೇ ಸೃಷ್ಟಿಯಾದದ್ದು ಟಿ.ವಿ ಚಾನೆಲ್‍ಗಳಿಗೆ ವರವಾಗಿ ಪರಿಣಮಿಸಿತು.  
ಇದೆಲ್ಲ ನಡೆಯುತ್ತಿರುವ ಸಮಯದಲ್ಲೇ ಹಲವಾರೂ ಏಳುಬೀಳುಗಳು, ಏನೇನೋ-ಎಷ್ಟೆಷ್ಟೋ ಲೋಕಕಲ್ಯಾಣದ ಕಾರ್ಯಗಳು ನಡೆಯುತ್ತ್ತಾ ಇದ್ದರೂ ಅದನ್ಯಾವ ಚಾನಲ್‍ಗಳು ಜಾಸ್ತಿ ತೋರಿಸುವ ಗೋಜಿಗೆ ಹೋಗಲಿಲ್ಲ. ಅಷ್ಟೇ ಏಕೆ ಪ್ರಧಾನಿ ಮೋದಿ ಲಂಡನ್‍ಗೆ ಹೋಗಿದ್ದು, ಮೊದಲ ದಿನ ಎಡಬಿಡದೆ ವರದಿಯಾಗುತ್ತಿದ್ದರೂ ನಂತರದ ಭಾಷಣ, ಬಸವಣ್ಣನ ಪ್ರತಿಮೆ ಅನಾವರಣ ಇತ್ಯಾದಿಗಳ್ಯಾವವು ಹೆಚ್ಚು ಸುದ್ದಿಯಾಗಲಿಲ್ಲ ಕಾರಣ ಬಿಗ್‍ಬಾಸ್ ಮನೆಯಿಂದ ಹುಚ್ಚ ವೆಂಕಟ್ ಹೊರಬಂದಿದ್ದರು!. ನೋಡಿ ಎಂಥಾ ವಿಪರ್ಯಾಸ!!!.
ಅಷ್ಟಕ್ಕೂ ಮಾಧ್ಯಮಗಳು ಇಂತಹ ವಿಚಾರಗಳನ್ನು ಯಾಕಿಷ್ಟು ವೈಭವೀಕರಿಸುತ್ತವೆ ಎಂಬುದು ಹೆಚ್ಚಿನವರ ಪ್ರಶ್ನೆಯಾದರೂ ಇದಕ್ಕೆ  ಟಿ. ಆರ್.ಪಿ ಎನ್ನೋ ಸಾಮಾನ್ಯ ಉತ್ತರ ಎಂದು ತಿಳಿದಿದೆ. ಹೌದು ಬಹುಶಃ ವೆಂಕಟ್ ಬಿಗ್‍ಬಾಸ್‍ನಿಂದ ಹೊರಬಿದ್ದ ನಂತರ ಮನೆಯಲ್ಲಿ ಸರಿಯಾಗಿ ಕುಳಿತಿದ್ದನೋ ಇಲ್ಲವೋ ಗೊತ್ತಿಲ್ಲ!, ಆದರೆ ರಾತ್ರಿ 2ರ ತನಕವೂ ಬೇರೆ ಬೇರೆ ನ್ಯೂಸ್ ಚಾನೆಲ್‍ಗಳಲ್ಲಿ ಕುಳಿತು ಮಾತನಾಡಿದ್ದ. ಊಟ ಮಾಡಿಸಿದ್ದರೋ ಇಲ್ಲವೋ! ಆದರೆ ಬ್ರೇಕ್ ಕೊಡದೆ ಮಾತನಾಡಿಸಿದ್ದರು... ಯಾಕೆಂದರೆ ಅವನೊಬ್ಬ ಟಿ.ಆರ್.ಪಿ ಮೇಕರ್.
ವರ್ಷಗಳ ಹಿಂದೆ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಎನ್ನುವ ರಿಯಾಲಿಟಿ ಶೋನಲ್ಲಿ ತೊಡೆ ತಟ್ಟಿ ‘ಕುಂತ್ರೆ ಕುರುಬ ನಿಂತ್ರೆ ಕಿರುಬ’ ಎಂದು ಡೈಲಾಗ್ ಹೊಡೆದು ಕನ್ನಡ ಜನತೆಯ ಮನಗೆದ್ದು, ನಿಜವಾದ ಹೀರೋ ಆಗಿದ್ದ್ ‘ಜಂಗಲ್ ಜಾಕಿ ರಾಜೇಶ್’ ಎನ್ನುವ ಹುಡುಗ ಫೈನಲ್‍ನಲ್ಲಿ ಗೆದ್ದಾಗ ಇದೇ ಪಾಡನ್ನು ಅನುಭವಿಸಿದ್ದ.
ನಂತರದ ದಿನಮಾನಗಳಲ್ಲಿ ಇದೇ ಮಾಧ್ಯಮಗಳು ವೈಭವೀಕರಿಸಿ ಹೀರೋ ಮಾಡಿ, ಕಾಡಿನ ಮಧ್ಯದಲ್ಲಿ ಬೆಳೆದ ಹುಡುಗನನ್ನು ಪ್ಯಾಟೆಗೆ ತಂದು  ಇಲ್ಲಿನ ಸಂಪ್ರದಾಯ ಸಂಸ್ಕøತಿಯನ್ನು ತೋರಿಸಿ, ಅವನಿಗೆ ಆ ಕಡೆ ಸಂಪೂರ್ಣವಾಗಿ ಹಳ್ಳಿಯ ಕ್ರಮವನ್ನು ಅನುಸರಿಸಲಾಗದೆ, ಇತ್ತ ನಗರ ಜೀವನಕ್ಕೂ ಒಗ್ಗಲಾಗದೇ ಮನಸ್ಸಿನಲ್ಲಿ  ತೀವ್ರ ತಳಮಳ ಅನುಭವಿಸುವಂತೆ ಮಾಡಿ , ಮಾನಸಿಕ ಖಿನ್ನತೆಗೆ ಒಳಗಾಗುವಂತೆ ಮಾಡಿದ್ದರು. ಇದರಿಂದಾಗಿ  ಆತ ‘ ಅಕ್ಯೂಟ್ ಮೇನಿಯಾ’  ಖಾಯಿಲೆಗೂ ತುತ್ತಾಗಿದ್ದ.  ನಂತರ ಮನೆಯ ಮೇಲಿಂದ ಹಾರಿ ಪ್ರಾಣವನ್ನು ತೆತ್ತಿದ್ದ.   ಇಂತಹ ಚಿತ್ರಣವೊಂದು ಮಾಸುವ ಮುನ್ನವೇ ಇದೀಗ ಮತ್ತೊಬ್ಬನನ್ನು ಹೀರೋ ಮಾಡಿ, ಅವನಾಡುವ ಮಾತುಗಳಿಗೆ ಬಣ್ಣ ಬಳಿದು ಟಿ.ಆರ್.ಪಿ ಹೆಚ್ಚಿಸಿಕೊಂಡು  ಇವನ ಕತೆಯನ್ನು ಮುಗಿಸುತ್ತಾರೋ ಏನೋ ತಿಳಿದಿಲ್ಲ ಎನ್ನುವುದೇ ಸುಮಾರು ಜನರ ಭಯ. ವೆಂಕಟ್ ಒಬ್ಬ ಹುಚ್ಚನಲ್ಲ ಅವನೊಳಗೆ ಬೇಯುತ್ತಿರುವ ನೋವು, ತುಡಿತ ಹಾಗೆ ಆಡಿಸುತ್ತಿದೆ ಅಷ್ಟೆ.  ರಕ್ತದೊತ್ತಡ ಜಾಸ್ತಿಯಾಗಿ ಅತಿರೇಖತೆಗೆ ತಲುಪಿ ಏನೇನೋ ಆಡುವಂತೆ ಮಾಡುತ್ತಿದೆ. ಇದು ಸ್ಥಿತ ಪ್ರಜ್ಞೆ ಹಾಗೂ ಸಮಯ ಪ್ರಜ್ಞೆ ಇಲ್ಲದ ಆಟವಷ್ಟೆ...
 ಟಿ.ವಿ ಮಾಲೀಕರೇ ಯಾಕಿಷ್ಟು ಉತ್ಸಾಹ ನಿಮಗೆ ಬೇರೆಯವರ ಜೀವನದಾಟದಲ್ಲಿ.!? ಅದೇ ವೆಂಕಟ ಯಾಕೆ ಹೀಗಾದ ಅವನನ್ನು ಸರಿ ಮಾಡೋಕೆ ಆಗುತ್ತಾ? ಅವನಿಗೆ ನಮ್ಮಿಂದ ಏನಾದರೂ ಸಹಾಯ ಆಗಬಹುದಾ?, ಅವನ ಸಮಸ್ಯೆ ಏನು ಎಂಬಿತ್ಯಾದಿ ವಿಚಾರವನ್ನು ಗಹಗಹಿಸುವುದ ಬಿಟ್ಟು, ಅವನ ಜೊತೆ ಡಮ್ಮಿ ನಿರೂಪಕನೊಬ್ಬನನ್ನು ಕುಳ್ಳಿರಿಸಿ, ಅವನು ಹೇಳಿದ ಹಾಗೆ ಪೂಸಿ ಹೊಡೆದು ಮರುಮಾತನಾಡದೇ ಊಟ ಏನ್ ಮಾಡ್ತೀರಾ?, ಅವರ ಬಗ್ಗೆ ಏನ್ ಹೇಳ್ತೀರಾ?, ಇವರಿಗೆ ಬೈತೀರಾ!? ಎಂದೆಲ್ಲಾ ಕಾಲಹರಿಸಿ, ನಿಮ್ಮ ಜೀವನ ಉತ್ತುಂಗಕ್ಕೇರಿಸಿ, ಮತ್ತೊಬ್ಬನ ಜೀವನ ಪಲ್ಟಿ ಹೊಡೆಸುವುದು ಸರಿನಾ?  ದಯಮಾಡಿ ಉತ್ತರಿಸಿ.
ಹಿಂದಿನ ದಿನ  ಸ್ಟುಡಿಯೋದಲ್ಲಿಟ್ಟುಕೊಂಡು ಕೊಂಡಾಡಿದವರು ಆನಂತರ ದಿನ ಶಾಕ್ ನ್ಯೂಸ್‍ನ್ನು ಕೊಟ್ಟು ಮತ್ತೇ ಬ್ರೇಕಿಂಗ್ ಎಂದರು. ಬಹುಶಃ ಇಷ್ಟು ಆಗಬೇಕು ಎಂದು ಕಾದಿದ್ದರೋ ಗೊತ್ತಿಲ್ಲ ಆದರೂ ಇಷ್ಟಾಯ್ತು...
“ ಕುತಂತ್ರದಿಂದ ಮಸಿ ಬಡಿಸಿದರು, ಬಾಯಿಗೆ ಬಂದಂತೆ ಮಾತಾಡಿಸಿದರು. ವೆಂಕಟ್ ಮೇಲೆ ಆರೋಪ ಬಿತ್ತು, ಪೋಲೀಸರು ಅರೆಸ್ಟ್ ಮಾಡಿದ್ರು, ಕೋರ್ಟ್‍ಗೆ ಹಾಜರು ಪಡಿಸಿದ್ರು...ಕೋರ್ಟ್ ಹಾಲ್ ತುಂಬಿತ್ತು... ನೂರಕ್ಕೂ ಹೆಚ್ಚು ಅಡ್ವೋಕೇಡ್‍ಗಳು ವೆಂಕಟ್‍ನ ನೋಡಲು ಮುಗಿಬಿದ್ರು, ಆದರೆ ವಿಚಾರಣೆ ವೇಳೆ ವೆಂಕಟ್ ಪರ ವಕೀಲರು ಜೆರಾಕ್ಸ್‍ಗೆಂದು ಹೋದವರು ಬರಲಿಲ್ಲ... ಕೋರ್ಟ್ ಹಾಲ್‍ನಲ್ಲಿದ್ದ 400 ಕ್ಕೂ ಅಧಿಕ ವಕೀಲರು ವೆಂಕಟ್ ಬಳಿ ನಾವೇ ಬಂದು ಪುಕ್ಸಟ್ಟೆ ವಾದ ಮಂಡಿಸ್ತೀವಿ ಅಂತದ್ರು. ಆದರೆ ನಂತರ ಸುಮ್ಮನಿರಿ ಎನ್ನುವ ಜಡ್ಜ್ ಮಾತಿಗೆ ಎಲ್ಲ ಸುಮ್ಮನಾದ್ರು.  ಜಡ್ಜೇ ವಾದ ಶುರು ಮಾಡಿದ್ರು... ನೀನು ಅಂಬೇಡ್ಕರನ್ನು ನಿಂದಿಸಿದ್ದು ನಿಜಾನಾ ಅಂತ ಕೇಳಿದ್ರು. ಪಾಪ ವೆಂಕಟ್ ನಿಜ ನುಡಿದು ಹೌದೆಂದ. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತು ಕೋರ್ಟ್. ವೆಂಕಟ್ ಅಣ್ಣ ಮಾತ್ರ ಎಲ್ಲದಕ್ಕೂ ಮೀಡಿಯಾಗಳೇ ಕಾರಣ ಎಂದ್ರು. ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದ್ರು. ಅಲ್ಲೂ ಅಭಿಮಾನಿಗಳ ಜೈಕಾರ ಸಿಕ್ತು...”
ಇಷ್ಟೆಲ್ಲಾ ಆಯ್ತು ಇನ್ನು ಅದರ ಫಲಿತಾಂಶ ಎಲ್ಲಿಗೆ ಹೋಗಿ ಮುಟ್ಟುವುದೋ ಆ ದೇವನೇ ಬಲ್ಲ. ಆದರೆ ಟಿ.ಆರ್.ಪಿ ಸಮರಕ್ಕಾಗಿ ಮತ್ತೊಬ್ಬನ ಜೀವನವನ್ನೇ ಸಮರ ಸಾರುವುದು ಎಷ್ಟು ಸರಿ...? ಮಾನಸಿಕವಾಗಿ ನೊಂದಿರುವವನ್ನು ಕೂರಿಸಿ ಮಜಾ ತಗೊಂಡ್ರು... ಟಿ.ಆರ್.ಪಿ ಸುಲ್ತಾನ ಏಕಾಂಗಿಯಾಗಿ ಇರಲು ಬಿಡದೆ ಪ್ರಚೋಧನಾತ್ಮಕವಾಗಿ ಕೆಣಕಿ ಕಣ್ಣೀರು ಸುರಿಸುವಂತೆ ಮಾಡಿದರು. ಅಣ್ಣ ತಮ್ಮಂದಿರಂತಿದ್ದವರನ್ನು ದಾಯಾದಿಗಳಂತೆ ಮಾಡಿದರು. ನಿಜಕ್ಕೂ ಇದು ವಿಚಾರ ಹೀನತೆಯ ಪರಮಾವಧಿ, ಟಿ.ಆರ್.ಪಿ ಹುಚ್ಚು


1 comment:

  1. The King Casino - Ventureberg
    The King https://deccasino.com/review/merit-casino/ Casino is owned by British casino casino-roll.com operator poormansguidetocasinogambling Crown Resorts ventureberg.com/ and operated by Crown gri-go.com Resorts. It is owned by British ADDRESS: CASTLE

    ReplyDelete